ದಕ್ಷಿಣ ಕನ್ನದ ಜಿಲ್ಲಾ
ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿ ಅವರು ಜಿಲ್ಲೆಯಲ್ಲಿ ಸ್ವತ್ಛತೆಯ ಅನುಷ್ಠಾನಕ್ಕಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳಲ್ಲಿ ಸ್ವತ್ಛತಾ ಜಾಗೃತಿಯೂ ಒಂದು. ಎಂ.ಆರ್. ರವಿ ರವರು ಸ್ವತ್ಛತೆ ಕುರಿತ ಹಾಡನ್ನೂ ಬರೆದಿದ್ದಾರೆ.
ಮಕ್ಕಳಿಂದಲೇ ಸ್ವತ್ಛತಾ ಜಾಗೃತಿಗಾಗಿ ಕವನ ರಚಿಸಿ, ಹಾಡಿಸುವ ಸೃಜನಾತ್ಮಕ ಮತ್ತು ರಚನಾತ್ಮಕ ಚಟುವಟಿಕೆಯಾಗಿದೆ. ಇದೀಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಿಯಾಶೀಲರಾಗಿದ್ದಾರೆ. ಅಕ್ಟೋಬರ್ ನಿಂದಲೇ ಶಾಲೆಗಳಲ್ಲಿ ಸ್ವಚ್ಛತಾ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ.
.
ಶಿಕ್ಷಣ ಇಲಾಖೆ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ವೇಳಾಪಟ್ಟಿ ತಯಾರಿಸಿ ಶಾಲೆಗಳಿಗೆ ನೀಡಲಾಗಿದ್ದು, ಅದರಂತೆ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ಪ್ರತೀ ಶನಿವಾರದ ಒಂದು ಅವಧಿಯಲ್ಲಿ ಶಾಲೆಗಳಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ವೇಳಾಪಟ್ಟಿಗೆ ಅನುಸಾರವಾಗಿ ಈಗಾಗಲೇ ತರಗತಿವಾರು ಸ್ವಚ್ಛತಾ ಸ್ಪರ್ಧೆ, ಶಾಲಾ ಸ್ವಚ್ಛತಾ ನೀತಿ ರಚನೆ, ಸ್ವತ್ಛತಾ ಚಿತ್ರಕಲಾ ಸ್ಪರ್ಧೆ, ಹೆತ್ತವರಿಗೆ ಕಾರ್ಯಾಗಾರ, ಮನೆಯಿಂದ ಪ್ಲಾಸ್ಟಿಕ್ ಸಂಗ್ರಹಿಸಿ ಪಂಚಾಯತ್ಗೆ ನೀಡುವ ಕಾರ್ಯಕ್ರಮ, ಸ್ವಚ್ಛತೆಗೆ ಸಂಬಂಧಪಟ್ಟ ನಾಟಕ ಪ್ರದರ್ಶನ, ಕೊಲಾಜ್ ತಯಾರಿಕೆ ಇತ್ಯಾದಿ ಚಾಲ್ತಿಯಲ್ಲಿದೆ. ಮುಂದಿನ ದಿನಗಳಲ್ಲಿ ಪರಿಸರ ಹಾಡು, ಕಸದಿಂದ ರಸ ಕಾರ್ಯಾಗಾರ, ಸ್ವಚ್ಛತಾ ಜಾಥಾ, ಮಳೆ ನೀರು ಕೊಯ್ಲು, ಸ್ವಚ್ಛತೆಯ ಬಗ್ಗೆ ಕವನ ರಚನೆ, ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಗ್ರಾಮದ ಸ್ವತ್ಛತೆ ಸಮೀಕ್ಷೆ ಹಾಗೂ ಗ್ರಾ.ಪಂ.ಗಳಲ್ಲಿ ಕಾರ್ಯಕ್ರಮ, ಸೌಲಭ್ಯಗಳ ಬಗ್ಗೆ ತಿಳಿಯಲು ಪಂಚಾಯತ್ಗೆ ಭೇಟಿ ಇತ್ಯಾದಿ ನಡೆಯುತ್ತಿದೆ.
No comments:
Post a Comment